Virupaksha Belvadi
Author
Virupaksha Belvadi
ವಿರೂಪಾಕ್ಷ ಬೆಳವಾಡಿ, ಚಿಕ್ಕಮಗಳೂರು ಜಿಲ್ಲೆ ಬೆಳವಾಡಿಯವರು. ಸುಮಾರು 25 ವರ್ಷಗಳಿಂದ ಯೋಗಕ್ಷೇತ್ರದಲ್ಲಿದ್ದು ನಾಡಿನಾದ್ಯಂತ ಯೋಗದ ಮೂಲಕ ಆರೋಗ್ಯವೃದ್ಧಿಗೆ ಶ್ರಮಿಸುತ್ತಿದ್ದಾರೆ. ಯೋಗಕ್ಷೇಮ ಎಂಬ ಸಂಸ್ಥೆಯ ಮೂಲಕ ಯೋಗ ಶಿಬಿರಗಳನ್ನು ನಡೆಸುತ್ತಿದ್ದು, ಸೂರ್ಯೋಪಾಸನೆ, ಸಂಸ್ಕಾರ ಸಿಂಚನ ,ಜನನಿ, ಸಾಧನಗಳೊಂದಿಗೆ ಯೋಗಸಾಧನೆ ಎಂಬ 7 ಕೃತಿಗಳನ್ನು ರಚಿಸಿದ್ದಾರೆ. ಸಾಹಿತ್ಯಲೋಕ ಪಬ್ಲಿಕೇಷನ್ಸ್ನಿಂದ ಸಾವಿರದ ಸತ್ಯ,ಜನನಿ,ಆತ್ಮದರ್ಶನ ಎಂಬ 3 ಪುಸ್ತಕಗಳು ಪ್ರಕಟವಾಗಿವೆ.
ವಿಜಯ ಕರ್ನಾಟಕ ಪತ್ರಿಕೆಯಲ್ಲಿ “ಡೈಲಿಯೋಗ” ಎಂಬ ಹೆಸರಿನ ಯೋಗಕ್ಕೆ ಸಂಬಂಧಿಸಿದಂತೆ 650ಕ್ಕೂ ಹೆಚ್ಚು ಅಂಕಣಗಳನ್ನು ಬರೆದಿದ್ದು, ಇವರ ಯೋಗಸಾಧನೆ ಗುರುತಿಸಿ 2018ರಲ್ಲಿ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಹಾಗೂ ನಾಡ ಭೂಷಣ ಪ್ರಶಸ್ತಿ ಲಭಿಸಿದೆ.
ವಿಜಯ ಕರ್ನಾಟಕ ಪತ್ರಿಕೆಯಲ್ಲಿ “ಡೈಲಿಯೋಗ” ಎಂಬ ಹೆಸರಿನ ಯೋಗಕ್ಕೆ ಸಂಬಂಧಿಸಿದಂತೆ 650ಕ್ಕೂ ಹೆಚ್ಚು ಅಂಕಣಗಳನ್ನು ಬರೆದಿದ್ದು, ಇವರ ಯೋಗಸಾಧನೆ ಗುರುತಿಸಿ 2018ರಲ್ಲಿ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಹಾಗೂ ನಾಡ ಭೂಷಣ ಪ್ರಶಸ್ತಿ ಲಭಿಸಿದೆ.