N S Lakshminarayana Bhatta

N S Lakshminarayana Bhatta

ಕನ್ನಡ ಸಾಹಿತ್ಯ ಲೋಕದಲ್ಲಿ, ಎನ್ನೆಸ್ಸೆಲ್ ಎಂದೇ ಮನೆಮಾತಾಗಿರುವ ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು [೨೯ ಅಕ್ಟೋಬರ್ ೧೯೩೬ – ೦೬ ಮಾರ್ಚ್ ೨೦೨೧], ಭಾವಗೀತೆ ಸಾಹಿತ್ಯ, ವಿಮರ್ಶೆ, ಅನುವಾದ, ನವ್ಯಕವಿತೆ, ಮಕ್ಕಳಿಗಾಗಿ ಗೀತೆಗಳ ರಚನೆ, ಮುಂತಾದ ಹಲವರು ಪ್ರಕಾರಗಳಲ್ಲಿ ವ್ಯವಸಾಯ ಮಾಡಿದ್ದಾರೆ. ಅವರು ಕನ್ನಡ-ಸಂಸ್ಕೃತ-ಇಂಗ್ಲೀಷ್ ಭಾಷೆಗಳಲ್ಲಿ ಕೃತಿರಚನೆ ಮಾಡಿದ್ದಾರೆ. ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು ೧೯೩೬ಅಕ್ಟೋಬರ ೨೯ ರಂದು ಶಿವಮೊಗ್ಗೆಯಲ್ಲಿ ಹುಟ್ಟಿದರು. ತಂದೆ ಶಿವರಾಮ ಭಟ್ಟ, ತಾಯಿ ಮೂಕಾಂಬಿಕೆ. ಎಂ.ಎ ಪದವಿ ಪಡೆದ ಬಳಿಕ ಭಟ್ಟರು ಭಾಷಾಶಾಸ್ತ್ರ ಸಂಶೋಧಕರಾಗಿ ಎರಡು ವರ್ಷ ಕೆಲಸ ಮಾಡಿ, ತನ್ನಂತರ ಕಾಲೇಜಿನಲ್ಲಿ ಅಧ್ಯಾಪಕರಾದರು.
ಎನ್.ಎಸ್.ಎಲ್.ಅವರಿಗೆ ಬಹು-ಪ್ರಿಯವಾದ ಪ್ರಕಾರಗಳಲ್ಲಿ ಒಂದು. ಜಗನ್ನಾಥ ವಿಜಯ, ಮುದ್ರಾಮಂಜೂಷ ಕಾವ್ಯಗಳನ್ನು ರಚಿಸಿದ್ದಾರೆ. ಭಟ್ಟರ ಕಾರ್ಯವನ್ನು ಗುರುತಿಸಿ, ’ಎನ್.ಸಿ.ಇ.ಆರ್.ಟಿ’ ಸಂಸ್ಥೆಯಿಂದ ಶಿಶು ಸಾಹಿತ್ಯಕ್ಕಾಗಿ ’ಬಾಲಸಾಹಿತ್ಯ ಪುರಸ್ಕಾರ’ ಲಭಿಸಿದೆ. ಅನುವಾದಗಳಲ್ಲಿ ಮುಖ್ಯವಾದವುಗಳು, ’ಮೃಚ್ಛಕಟಿಕ’, ’ಇಸ್ಪೀಟ್ ರಾಜ್ಯ’, ’ಟ್ವೆಲ್ಫ್ತ್ ನೈಟ್’, ಮತ್ತು ’ಭಾರತೀಯ ’ಗ್ರಂಥ ಸಂಪಾದನಾ ಪರಿಚಯ’, ’ಕನ್ನಡ ಮಾತು’ ಎನ್ನುವ ಪುಟ್ಟ-ಗ್ರಂಥ, ಕನ್ನಡ ಭಾಷೆಯನ್ನು ಬೆಳವಣಿಗೆಯನ್ನು ಸೂಕ್ತ ದರ್ಶನಗಳೊಂದಿಗೆ ಸಾರ್ವಜನಿಕರಿಗೆ ತಲುಪುವ ಆಶಯದಲ್ಲಿ ಯಶಸ್ವಿಯಾಗಿವೆ.
’ಪುತಿನ ರವರ ಗೋಕುಲ ನಿರ್ಗಮನ’, ’ಅಹಲ್ಯೆ’, ’ಹಂಸ ದಮಯಂತಿ’ಮೊದಲಾದ ’ಗೀತನಾಟಕ’ಗಳ ಪರಂಪರೆಯನ್ನು ಮುಂದುವರೆಸುವ ಪ್ರಾಮಾಣಿಕ ಪ್ರಯತ್ನ, ’ಊರ್ವಶಿ ಎಂಬ ಗೀತ ನಾಟಕ’ದಲ್ಲಿ ಕಾಣಬಹುದು.’ಸುನೀತ’ (ಶೇಕ್ಸಪಿಯರನ ಐವತ್ತು ಸಾನೆಟ್ಟುಗಳು) ‘ಚಿನ್ನದ ಹಕ್ಕಿ’ ( ಯೇಟ್ಸ ಕವಿಯ ಐವತ್ತು ಕವನಗಳು)
’ಭಾರತೀಯ ಗ್ರಂಥ ಸಂಪಾದನಾ ಪರಿಚಯ’,’ವೆಂಬ ಅನುವಾದ ಗ್ರಂಥ ಇಂದಿಗೂ ಗ್ರಂಥ ಪಾಠ ಶೋಧನೆಯಲ್ಲಿ ನಿರತರಾದ ಸಂಶೋಧಕರಿಗೆ ಅತ್ಯಂತ ಉಪಯುಕ್ತವಾದ ಹೊತ್ತಿಗೆಯಾಗಿದೆ.

Books By N S Lakshminarayana Bhatta