Vikasa Negiloni

Vikasa Negiloni
3 books

Author

Vikasa Negiloni

ವಿಕಾಸ ನೇಗಿಲೋಣಿ, ಹುಟ್ಟಿದ್ದು ಶಿವಮೊಗ್ಗ ಜಿಲ್ಲೆ, ಹೊಸನಗರ ತಾಲೂಕಿನ ನೇಗಿಲೋಣಿಯಲ್ಲಿ. ಊರಲ್ಲೇ ಪ್ರಾಥಮಿಕ ಶಿಕ್ಷಣ, ಉಡುಪಿಯಲ್ಲಿ ಹೈಸ್ಕೂಲ್ ಶಿಕ್ಷಣ ಪೂರೈಸಿದರು. ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಪಿಯುಸಿ ಮತ್ತು ಪದವಿ ವ್ಯಾಸಂಗ ಪೂರ್ಣಗೊಳಿಸಿದರು.
ಸಂಯುಕ್ತ ಕರ್ನಾಟಕದಲ್ಲಿ ಪತ್ರಕರ್ತರಾಗಿ, ಅನಂತರ ವಿಜಯ ಕರ್ನಾಟಕ, ಉದಯವಾಣಿ, ಕನ್ನಡ ಪ್ರಭ, ಸುವರ್ಣ ನ್ಯೂಸ್, ಸಖಿ ನಿಯತಕಾಲಿಕೆಗಳಲ್ಲಿ ಸುಮಾರು 16 ವರ್ಷಗಳ ಕಾಲ ವೃತ್ತಿ ನಿರ್ವಹಿಸಿದರು. ‘ಯಶೋದೆ’, ‘ಗಾಂಧಾರಿ’ ಸೇರಿದಂತೆ ಹಲವು ಧಾರಾವಾಹಿಗಳಿಗೆ ಸಂಭಾಷಣೆ ರಚಿಸಿದ್ದಾರೆ. ‘ಯಶೋದೆ’, ‘ಗಾಂಧಾರಿ’, ‘ರಾಧಾ ರಮಣ’, ‘ಅಗ್ನಿಸಾಕ್ಷಿ’, ‘ಸೀತಾವಲ್ಲಭ’, ‘ನಮ್ಮನೆ ಯುವರಾಣಿ’, ‘ಮಿಥುನ ರಾಶಿ’ ಮೊದಲಾದ ಧಾರಾವಾಹಿಗಳಿಗೆ ಹಾಡುಗಳನ್ನು ಬರೆದ ಅನುಭವ ಇವರಿಗಿದೆ. ಸದ್ಯ, ಕಲರ್ಸ್ ಕನ್ನಡ ವಾಹಿನಿಯಲ್ಲಿ ಉದ್ಯೋಗ ಮಾಡುತ್ತಿದ್ದಾರೆ.
‘ಮಳೆಗಾಲ ಬಂದು ಬಾಗಿಲು ತಟ್ಟಿತು’, ಮೊದಲ ಪ್ರಕಟಿತ ಕಥಾಸಂಕಲನ. ‘ರಥಬೀದಿ ಎಕ್ಸ್ ಪ್ರೆಸ್’ ಎಂಬ ಅಡಾಲಸೆಂಟ್ ಆತ್ಮಚರಿತ್ರೆ ಪ್ರಕಟವಾಗಿದೆ. ‘ಬಸವರಾಜ ವಿಳಾಸ’ ಮೂರನೇ ಸಂಕಲನವಾಗಿದೆ.

Books by Vikasa Negiloni

Autobiography

₹110

Short story

₹150

Story Collection

₹130